KSFES Recruitment 2024 : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ SSLC, PUC ಪಾಸಾದವರಿಗೆ 950ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ…
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಮಂಜೂರಾತಿ ನೀಡುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಸರ್ಕಾರದಿಂದ ಅನುಮೋದನೆ ದೊರೆಯುವ ಸಂಪೂರ್ಣ ಸಾಧ್ಯತೆಗಳಿದ್ದು ಈ ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Karnataka State Fire and Emergency Service Department Recruitment 2024 – ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಒಟ್ಟು 975 ಹುದ್ದೆಗಳ ಕೊರತೆ ಇದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಇಲಾಖೆಯ ನಿರ್ದೇಶಕರು ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಮಂಜೂರಾತಿ ನೀಡುವಂತೆ ಅನುಮತಿ ಕೋರಿ ಪತ್ರ ಬರೆದಿದ್ದು ಶೀಘ್ರದಲ್ಲಿ ಇದಕ್ಕೆ ಸರ್ಕಾರದಿಂದ ಅನುಮೋದನೆ ದೊರೆಯುವ ಸಂಪೂರ್ಣ ಸಾಧ್ಯತೆಗಳಿವೆ.
ಇದನ್ನೂ ಓದಿ: ಕೃಷಿ ಪಂಪ್ಸೆಟ್ಗೆ ಸೋಲಾರ್ ವಿದ್ಯುತ್: ರೈತರಿಂದ ಅರ್ಜಿ ಆಹ್ವಾನ Solar Agricultural Pump Set Scheme
ಖಾಲಿ ಇರುವ ಹುದ್ದೆಗಳ ವಿವರ
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಒಟ್ಟಾರೆ 5,352 ಹುದ್ದೆಗಳ ಮಂಜೂರಾತಿ ಸಿಕ್ಕಿತ್ತು. ಇವುಗಳಲ್ಲಿ ಇಲ್ಲಿಯ ವರೆಗೆ ಒಟ್ಟು 4,486 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ಆದರೆ ನೇರ ನೇಮಕಾತಿ ಹಾಗೂ ಮುಂಬಡ್ತಿ ಸೇರಿ 1,075 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳುವ ಒಟ್ಟು ಹುದ್ದೆಗಳ ಸಂಖ್ಯೆ 975.
ಪ್ರಸ್ತುತ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ
- ಅಗ್ನಿಶಾಮಕ ಠಾಣಾಧಿಕಾರಿ : 64 ಹುದ್ದೆಗಳು
- ಅಗ್ನಿಶಾಮಕ : 731 ಹುದ್ದೆಗಳು
- ಅಗ್ನಿಶಾಮಕ ಚಾಲಕ : 153 ಹುದ್ದೆಗಳು
- ಚಾಲಕ ತಂತ್ರಜ್ಞ : 27 ಹುದ್ದೆಗಳು
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ವಯೋ ನಿವೃತ್ತಿ ಹಾಗೂ ಮರಣ ಹೊಂದಿರುವ ಹುದ್ದೆಗಳಿಗೆ ನೇಮಕಾತಿ ಮಾಡದೇ ಇರುವಂತಹ ಹುದ್ದೆಗಳನ್ನು ಹಾಗೂ ಇನ್ನಿತರೇ ಕಾರಣಗಳಿಂದಾಗಿ ಖಾಲಿಯಾದ ಹುದ್ದೆಗಳಿಂದ ಅಗ್ನಿಶಾಮಕ ಠಾಣೆಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕೊರತೆ ಉಂಟಾಗಿರುವುದರಿAದ ಶೀಘ್ರದಲ್ಲಿಯೇ ನೇಮಕಾತಿ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಅದೇ ರೀತಿ ರಾಜ್ಯಾದ್ಯಂತ ಹೊಸ ಅಗ್ನಿಶಾಮಕ ಠಾಣೆಗಳ ನಿರ್ಮಾಣದಿಂದಲು ಸಹ ಹುದ್ದೆಗಳ ಕೊರತೆ ಉಂಟಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿ೦ದ ಅಥವಾ ವಿಶ್ವವಿದ್ಯಾಲಯದಿಂದ SSLC, PUC ಅಥವಾ ಪದವಿ ಮುಗಿದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ.
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೆ ಈಗಿನಿಂದಲೇ ಪರೀಕ್ಷೆಗೆ ಸಂಪೂರ್ಣ ತಯಾರಿಯನ್ನು ಆರಂಭಿಸಿ ಹಾಗೂ ಈ ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ.
ಇದನ್ನೂ ಓದಿ: ಇನ್ಮುಂದೆ ಈ ರೈತರ ಭೂಮಿ ಮಾರುವಂತಿಲ್ಲ, ಯಾರೂ ಖರೀದಿಸುವಂತೆಯೂ ಇಲ್ಲ | ಬಂತು ಹೊಸ ಕಾಯ್ದೆ PTCL Act Amendment