
ರಾಜ್ಯದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆ ಭರವಸೆ ಮೂಡಿಸುತ್ತಿದೆ. ಕಾದ ಕಾವಲಿಯಂತಾಗಿದ್ದ ಭೂಮಿಗೆ ಜೀವ ಕಳೆ ಬಂದಿದ್ದು; ಅನ್ನದಾತರು ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದಾರೆ.
ಮುಂದಿನ ನಾಲ್ಕೈದು ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: Surya Ghar Rooftop Scheme-10 ಲಕ್ಷ ಮನೆಗಳಿಗೆ ಸೋಲಾರ್ ಕರೆಂಟ್
ವಾಡಿಕೆಗಿಂತ ಹೆಚ್ಚು ಮಳೆ
ಮಾರ್ಚ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಇಲಾಖೆ ಹೇಳಿದೆ. ವಾಡಿಕೆಯಂತೆ ರಾಜ್ಯದಲ್ಲಿ ಸರಾಸರಿ 8.8 ಸೆಂ.ಮೀ. ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ. ಮಳೆಯಾಗಿದೆ ಎಂದು ತಿಳಿಸಿದೆ.
ಕಳೆದ ಗುರುವಾರ ಕೊಡಗು ಜಿಲ್ಲೆಯಲ್ಲಿ 5 ಸೆಂ.ಮೀ ಮಳೆಯಾಗಿದ್ದು; ಮುಂದಿನ ದಿನಗಳಲ್ಲಿ ಕೊಡಗು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: Male nakshatragalu 2025- 2025ರ ಮಳೆ ನಕ್ಷತ್ರಗಳು | ಹೇಗಿದೆ ಈ ವರ್ಷದ ಮಳೆಗಾಲ?
ಈ ಜಿಲ್ಲೆಗಳಲ್ಲಿ ಮಳೆ
ಮಾರ್ಚ್ ತಿಂಗಳ ಅಂತ್ಯ ಮತ್ತು ಏಪ್ರಿಲ್ ಆರಂಭದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಮುಂಗಾರು ಪೂರ್ವ ಮಳೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಈ ಕೆಳಕಂಡ ಜಿಲ್ಲೆಗಳಲ್ಲಿ ಏಪ್ರಿಲ್ 3ರ ವರೆಗೆ ಮಳೆಯಾಗಲಿದೆ:
- ದಕ್ಷಿಣ ಕನ್ನಡ
- ಉಡುಪಿ
- ಉತ್ತರ ಕನ್ನಡ
- ಚಿಕ್ಕಮಗಳೂರು
- ಹಾಸನ
- ಕೊಡಗು
- ಮೈಸೂರು
- ಶಿವಮೊಗ್ಗ
- ಬೆಳಗಾವಿ
- ಧಾರವಾಡ
- ಗದಗ
- ಹಾವೇರಿ
ಇದನ್ನೂ ಓದಿ: ಪ್ರೊಸೆಸಿಂಗ್ ಶುಲ್ಕವಿಲ್ಲದೇ ₹30 ಲಕ್ಷದ ವರೆಗೆ ಲೋನ್ Zero Processing Fee Home Loan